Matthew 8

ಯೇಸು ದಯವುಳ್ಳ ಅದ್ಭುತಕಾರ್ಯಗಳನ್ನು ಮಾಡಿ ತನ್ನ ಮಹಿಮೆಯನ್ನು ತೋರಿಸಿದ್ದು (8:2-9,34)

ಕುಷ್ಠರೋಗಿಯನ್ನು ಸ್ವಸ್ಥ ಮಾಡಿದ್ದು (ಮಾರ್ಕ 1:40-44; ಲೂಕ 5:12-14)

1ಯೇಸು ಬೆಟ್ಟದಿಂದ ಕೆಳಗೆ ಇಳಿದು ಬರುವಾಗ ಜನರು ದೊಡ್ಡಗುಂಪು ಆತನ ಹಿಂದೆ ಹೋದರು. 2ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, <<ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ>> ಅಂದನು. 3ಆತನು ಕೈಚಾಚಿ ಆತನನ್ನು ಮುಟ್ಟಿ, <<ನನಗೆ ಮನಸ್ಸುಂಟು; ಶುದ್ಧವಾಗು>> ಅಂದನು. ಕೂಡಲೆ ಅವನು ಕುಷ್ಠದಿಂದ ಶುದ್ಧನಾದನು.

4ಆಗ ಯೇಸು ಅವನಿಗೆ;
8:4 ಮತ್ತಾ. 9:30
<<ನೋಡು, ಯಾರಿಗೂ ಹೇಳಬೇಡ;
8:4 ಯಾಜ 14:2-32; ಲೂಕ 17:14
ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;>>
8:4 ಯಾಜಕರಿಗೆ
ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.

ಶತಾಧಿಪತಿಯ ಆಳನ್ನು ಸ್ವಸ್ಥಮಾಡಿದ್ದು

(ಲೂಕ 7:1-10,13,28,29)

5ಯೇಸು ಕಪೆರ್ನೌಮಿಗೆ ಬಂದಾಗ ಒಬ್ಬ ದಂಡಿನ
8:5 ನೂರು ಸಿಪಾಯಿಗಳ ಮೇಲಿರುವ ಸರದಾರ
ಶತಾಧಿಪತಿಯು ಆತನ ಬಳಿಗೆ ಬಂದು,
6<<ಕರ್ತನೇ, ನನ್ನ ಆಳು ಪಾರ್ಶ್ವವಾಯುವಿನ ನಿಮಿತ್ತ ತೀವ್ರವಾದ ನೋವಿನಿಂದ ಮನೆಯಲ್ಲಿ ಮಲಗಿ ನರಳುತ್ತಿದ್ದಾನೆ>> ಎಂದು ಹೇಳಿದನು. 7ಯೇಸು ಅವನಿಗೆ, <<ನಾನು ಬಂದು ಅವನನ್ನು ವಾಸಿ ಮಾಡುತ್ತೇನೆ>> ಎಂದು ಹೇಳಲು,

8ಆ ಶತಾಧಿಪತಿಯು, <<ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು. 9ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ <ಹೋಗು> ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ <ಬಾ> ಎಂದು ಹೇಳಿದರೆ ಬರುತ್ತಾನೆ; <ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು> ಎಂದು ಹೇಳಿದರೆ ಮಾಡುತ್ತಾನೆ>> ಅಂದನು. 10ಯೇಸು ಇದನ್ನು ಕೇಳಿ ಆಶ್ಚರ್ಯಚಕಿತನಾದನು, ತನ್ನ ಹಿಂದೆ ಬರುತ್ತಿದ್ದವರಿಗೆ, <<ನಾನು ಇಂಥಾ ಮಹತ್ತರವಾದ ನಂಬಿಕೆಯನ್ನು ಇಸ್ರಾಯೇಲ್ ಜನರಲ್ಲಿಯೂ ಕಾಣಲಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.

11ಇದಲ್ಲದೆ ನಿಮಗೆ ಹೇಳುವುದೇನಂದರೆ ಪೂರ್ವ ಪಶ್ಚಿಮ ದಿಕ್ಕುಗಳಿಂದ ಬಹಳ ಜನ ಬಂದು ಪರಲೋಕ ರಾಜ್ಯದಲ್ಲಿ ಅಬ್ರಹಾಮ, ಇಸಾಕ, ಯಾಕೋಬ ಎಂಬುವವರ ಸಂಗಡ ಊಟಕ್ಕೆ ಕುಳಿತುಕೊಳ್ಳುವರು; 12ಆದರೆ ರಾಜ್ಯದ ಮಕ್ಕಳು ಹೊರಗೆ ಕತ್ತಲೆಗೆ ಎಸೆಯಲ್ಪಡುವರು; ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು>> ಎಂದು ಹೇಳಿದನು. 13ಬಳಿಕ ಯೇಸು ಆ ಶತಾಧಿಪತಿಗೆ, <<ನೀನು ನಂಬಿದಂತೆ ನಿನಗಾಗಲಿ, ಹೋಗು>> ಎಂದು ಹೇಳಿದನು. ಅದೇ ಗಳಿಗೆಯಲ್ಲಿ ಅವನ ಆಳಿಗೆ ಗುಣವಾಯಿತು.

ಯೇಸುವಿನ ರೋಗನಿವಾರಕ ಕಾರ್ಯ

(ಮಾರ್ಕ 1:29-34; ಲೂಕ 4:38-41)

14ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ 15ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.

16ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು. 17ಇದರಿಂದ
8:17 ಯೆಶಾ 53:4
<<ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು>> ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.

ಶಿಷ್ಯರಾಗಬೇಕೆಂದಿರುವವರಿಗೆ ಬೇಲೆಕೋಡುವುದು ಅವಶ್ಯವೆಂದು ಯೇಸು ಬೋಧಿಸಿದ್ದು

(ಲೂಕ 9:57-60)

18ಯೇಸು ತನ್ನ ಸುತ್ತಲಿದ್ದ ಜನಗಳ ದೊಡ್ಡ ಗುಂಪುಗಳನ್ನು ಕಂಡು ಗಲಿಲಾಯ ಸಮುದ್ರದ ಆಚೆ ಭಾಗಕ್ಕೆ ಹೊರಟು ಹೋಗಬೇಕೆಂದು ಅಪ್ಪಣೆ ಕೊಟ್ಟನು. 19ಆಗ ಒಬ್ಬ ಶಾಸ್ತ್ರಿಯು ಹತ್ತಿರಕ್ಕೆ ಬಂದು ಆತನಿಗೆ, <<ಗುರುವೇ, ನೀನು ಎಲ್ಲಿಗೆ ಹೋದರೂ ನಾನು ನಿನ್ನನ್ನು ಹಿಂಬಾಲಿಸುತ್ತೇನೆ>> ಎಂದು ಹೇಳಲು, 20ಯೇಸು ಅವನಿಗೆ, <<ನರಿಗಳಿಗೆ ಗುದ್ದುಗಳಿವೆ, ಆಕಾಶದಲ್ಲಿ ಹಾರಾಡುವ ಹಕ್ಕಿಗಳಿಗೆ ಗೂಡುಗಳಿವೆ; ಆದರೆ ಮನುಷ್ಯಕುಮಾರನಿಗೆ ತಲೆಯಿಡುವಷ್ಟು ಸ್ಥಳವೂ ಇಲ್ಲ>> ಎಂದು ಹೇಳಿದನು.

21ಶಿಷ್ಯರಲ್ಲಿ ಬೇರೊಬ್ಬನು, <<ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ
8:21 ಯೆಹೂದ್ಯರ ಪದ್ಧತಿಯಂತೆ ಸತ್ತವರನ್ನು ಅದೇ ದಿನ ಹೂಳಬೇಕು; ಆದರೆ ಇಲ್ಲಿ ಈ ಶಿಷ್ಯನು ಯೇಸುವನ್ನು ತನ್ನ ತಂದೆ- ತಾಯಿ ಸಾಯುವ ತನಕ ಅವರ ಸೇವೆಮಾಡಿ ಬರುವುದಾಗಿ ಹೇಳುತ್ತಿದ್ದನು.
ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು>> ಅನ್ನಲಾಗಿ,
22ಯೇಸು ಅವನಿಗೆ, <<ನನ್ನನ್ನು ಹಿಂಬಾಲಿಸು, ಸತ್ತವರೇ ತಮ್ಮವರಲ್ಲಿ ಸತ್ತುಹೋದವರ ಉತ್ತರಕ್ರಿಯೆಗಳನ್ನು ಮಾಡಲಿ>> ಎಂದು ಹೇಳಿದನು.

ಯೇಸು ಬಿರುಗಾಳಿಯನ್ನು ನಿಲ್ಲಿಸಿದ್ದು

(ಮಾರ್ಕ 4:35-41; ಲೂಕ 8:22-25)

23ಯೇಸು ದೋಣಿಯನ್ನು ಹತ್ತಿದಾಗ ಆತನ ಶಿಷ್ಯರು ಆತನನ್ನು ಹಿಂಬಾಲಿಸಿದರು. 24ಅವರು ಹೋಗುತ್ತಿರುವಾಗ ಸಮುದ್ರವು ಅಲ್ಲೋಲಕಲ್ಲೋಲವಾಗಿ ದೋಣಿಯು ಅಲೆಗಳಿಂದ ಮುಚ್ಚುವಂತ್ತೆ ಆಯಿತು; ಆದರೆ ಯೇಸು ನಿದ್ರಿಸುತ್ತಿದ್ದನು. 25ಆಗ ಶಿಷ್ಯರು ಆತನ ಹತ್ತಿರ ಬಂದು ಆತನನ್ನು ಎಬ್ಬಿಸಿ, <<ಕರ್ತನೇ, ನಮ್ಮನ್ನು ಕಾಪಾಡು, ಸಾಯುತ್ತಿದ್ದೇವೆ>> ಎಂದರು.

26ಆತನು ಅವರಿಗೆ, <<ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?>> ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು. 27ಆ ಜನರು ಬೆರಗಾಗಿ, <<ಈತನು ಎಂಥವನಾಗಿರಬಹುದು! ಗಾಳಿಯೂ ಸಮುದ್ರವೂ ಸಹ ಈತನಿಗೆ ವಿಧೇಯವಾಗುತ್ತವಲ್ಲಾ>> ಅಂದರು.

ಯೇಸು ಇಬ್ಬರಿಂದ ಅನೇಕ ದೆವ್ವಗಳನ್ನು ಬಿಡಿಸಿದ್ದು

(ಮಾರ್ಕ 5:1-20; ಲೂಕ 8:26-39)

28ಆ ಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರುರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ. 29ಅವರು,
8:29 ಮತ್ತಾ. 14:33; 16:16
<<ದೇವರ ಕುಮಾರನೇ, ನಮ್ಮ ಗೊಡವೆ ನಿನಗೇಕೆ? ಕಾಲ ಬರುವುದಕ್ಕಿಂತ ಮೊದಲೇ ನಮ್ಮನ್ನು ದಂಡಿಸುವುದಕ್ಕೆ ಇಲ್ಲಿಗೆ ಬಂದಿರುವೆಯಾ>> ಎಂದು ಕೂಗಿದರು.

30ಅವರಿಂದ ಸ್ವಲ್ಪ ದೂರದಲ್ಲಿ ಬಹಳ ಹಂದಿಗಳ ಒಂದು ಹಿಂಡು ಮೇಯುತ್ತಿತ್ತು. 31ಆ ದೆವ್ವಗಳು, <<ನೀನು ನಮ್ಮನ್ನು ಇವರೊಳಗಿಂದ ಹೊರಡಿಸುವುದಾದರೆ ಆ ಹಂದಿಯ ಗುಂಪಿನೊಳಗೆ ನಮ್ಮನ್ನು ಕಳುಹಿಸಿಕೊಡು>> ಎಂದು ಬೇಡಿಕೊಂಡವು. 32ಆತನು ಅವುಗಳಿಗೆ, <<ಹೋಗಿರಿ>> ಅನ್ನಲು ಅವು ಹೊರಗೆ ಬಂದು ಹಂದಿಗಳೊಳಗೆ ಹೊಕ್ಕವು; ಅ ಕ್ಷಣವೇ ಆ ಗುಂಪೆಲ್ಲಾ ಓಡಿ ಕಡಿದಾದ ಸ್ಥಳದಿಂದ ಸಮುದ್ರದೊಳಗೆ ಬಿದ್ದು ನೀರಿನಲ್ಲಿ ಮುಳುಗಿ ಸತ್ತು ಹೋದವು.

33ಹಂದಿಗಳನ್ನು ಮೇಯಿಸುವವರು ಊರೊಳಕ್ಕೆ ಓಡಿಹೋಗಿ ಇದೆಲ್ಲವನ್ನು ದೆವ್ವಹಿಡಿದವರ ಸಂಗತಿ ಸಹಿತವಾಗಿ ತಿಳಿಸಲು; ಆಗ ಊರಿನವರೆಲ್ಲರೂ ಯೇಸುವನ್ನು ಸಂಧಿಸಲು ಹೊರಟುಬಂದು ಆತನನ್ನು ಕಂಡು ತಮ್ಮ ಸೀಮೆಯನ್ನು ಬಿಟ್ಟು ಹೋಗಬೇಕೆಂದು ಬೇಡಿಕೊಂಡರು.

34

Copyright information for KanULB